ಸಾಮಾಜಿಕ ಅಸಮಾನತೆ ಹಾಗೂ ಜಾತಿ ಶೋಷಣೆ ವಿಷಯವಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ಜನವರಿ 23ರಂದು ರಿಲೀಸ್ ಆಗಿದೆ. ವಿಮರ್ಶಕರಿಂದ ಈ ಚಿತ್ರ ಮೆಚ್ಚುಗೆ ಪಡೆದಿದೆ. ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಇದರಿಂದ ಚಿತ್ರಕ್ಕೆ ಮತ್ತಷ್ಟು ಬೆಂಬಲ ಸಿಕ್ಕಂತೆ ಆಗಿದ್ದು, ಹೆಚ್ಚು ಜನರನ್ನು ತಲುಪಲು ಈ ಬೆಳವಣಿಗೆ ಸಹಕಾರಿ ಆಗಲಿದೆ.
ಲ್ಯಾಂಡ್ಲಾರ್ಡ್ 70ರ ದಶಕದ ಕಥೆ ಹೊಂದಿದೆ. ರಾಚಯ್ಯ (ದುನಿಯಾ ವಿಜಯ್), ನಿಂಗವ್ವ (ರಚಿತಾ ರಾಮ್) ಮಗಳು ಭಾಗ್ಯಾ (ರಿತನ್ಯಾ ರಾಮ್) ಜೊತೆ ಹಾಯಾಗಿ ಜೀವನ ನಡೆಸುತ್ತಿರುತ್ತಾರೆ. ಆ ಊರಿನಲ್ಲಿ ಸಣ್ಣ ಧಣಿ (ರಾಜ ಬಿ. ಶೆಟ್ಟಿ) ಪಾರುಪತ್ಯ. ಆತ ಹೇಳಿದಂತೆ ನಡೆಯಬೇಕು. ಯಾರ ಬಳಿಯೂ ಜಮೀನು ಇರಬಾರದು ಎಂಬುದು ಆತನ ಆಜ್ಞೆ. ತಾವೇ ಬೆಳೆದ ಬೆಳೆಯಲ್ಲಿ ಸಿಗೋದು ಒಂದು ಹಿಡಿ ಮಾತ್ರ. ಇದನ್ನು ಪ್ರಶ್ನಿಸಿದ ಭಾಗ್ಯಾಳ ಪ್ರಿಯಕರನ ಸುಟ್ಟು ಕೊಲ್ಲಲಾಗುತ್ತದೆ. ಈ ಅಸಮಾನತೆ ವಿರುದ್ಧ ರಾಚಯ್ಯ ಸಿಡಿದೇಳುತ್ತಾರೆ. ಈ ರೀತಿಯಲ್ಲಿ ಸಿನಿಮಾ ಇದೆ.
ಲ್ಯಾಂಡ್ಲಾರ್ಡ್’ ಚಿತ್ರವನ್ನು ಜಡೇಶ್ ಕುಮಾರ್ ಹಂಪಿ ನಿರ್ದೇಶನ ಮಾಡಿದ್ದಾರೆ. ಈ ಮೊದಲು ವಿಜಯ್ ಹಾಗೂ ಜಡೇಶ್ ಕುಮಾರ್ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತೆರಿಗೆ ವಿನಾಯಿತಿ ಕೊಡುವಂತೆ ಮನವಿ ಮಾಡಿದ್ದರು. ಈ ವೇಳೆ ಸಿನಿಮಾ ನೋಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಈಗ ಸಂಬಂಧಪಟ್ಟ ಅಧಿಕಾರಿಗಳಿಗೆ ತೆರಿಗೆ ವಿನಾಯಿತಿ ನೀಡಲು ಸೂಚನೆ ಸಿದ್ದರಾಮಯ್ಯ ನೀಡಿದ್ದಾರೆ..
HOTLatest
ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
ದೃಷ್ಟಿಹೀನರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಲು ಮತ್ತು ಅವರ ಸ್ವಾವಲಂಬನೆಯನ್ನು ಹೆಚ್ಚಿಸಲು ನಾರಾಯಣ ನೇತ್ರಾಲಯದ ‘ಬಡ್ಸ್ ಟು ಬ್ಲಾಸಮ್ಸ್’ (Buds to Blossoms) ವಿಭಾಗವು, ‘SHG ಟೆಕ್ನಾಲಜೀಸ್’ ಸಹಯೋಗದೊಂದಿಗೆ ‘ಸ್ಮಾರ್ಟ್ ಬಾಹ್ಯಾಕಾಶ ಪಯಣಕ್ಕೆ ವಿದಾಯ ಹೇಳಿದ ಸುನೀತಾ ವಿಲಿಯಮ್ಸ್
ಅಮೆರಿಕದ ಬಾಹ್ಯಾಕಾಶ ಸಂಸ್ಥೆಯ ಪ್ರಸಿದ್ಧ ಗಗನಯಾತ್ರಿ, ಬಾಹ್ಯಾಕಾಶದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿರುವ ಭಾರತದ ಹೆಮ್ಮೆಯ ಪುತ್ರಿ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತರಾಗುವ ಮೂಲಕ ಬಾಹ್ಯಾಕಾಶ ಪರಿಶೋಧನೆಯ ಇತಿಹಾಸದಲ್ಲಿ ಅತ್ಯಂತ ಗೌರವಾನ್ವಿತ ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ ಕಾಲಿವುಡ್ನ ಯಶಸ್ಸಿ ನಿರ್ದೇಶಕ ಲೋಕೇಶ್ ಕನಕರಾಜು ಇದೀಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆಕ್ಷನ್ ಕಟ್ ಹೇಳಲು GALLERYfrom Vande Karnataka













ಕನ್ನಡ ಹೆಸರಾಂತ ಕಾದಂಬರಿಗಾರ್ತಿ ಆಶಾ ರಘು ಅಕಾಲಿಕ ನಿಧನ
ಯಶ್ ಬರ್ತ್ಡೇಗೆ ಬಂಪರ್ ಗಿಫ್ಟ್: ಟಾಕ್ಸಿಕ್ ಟೀಸರ್ ರಿಲೀಸ್, ರಾಕಿಂಗ್ ಸ್ಟಾರ್ ಲುಕ್ಗೆ ಫ್ಯಾನ್ಸ್ ಫಿದಾ
When rail staff responds to passengers. Vande Karanataka’s social media message triggers quick action
ಭಾರತೀಯ ಸಂವಿಧಾನ ರಚನೆಗೆ ಅಡಿಗಲ್ಲು ಹಾಕಿದ ಹೆಮ್ಮೆಯ ಕನ್ನಡಿಗ
ಕನ್ನಡ ರಂಗಭೂಮಿ ನಟ ಯಶವಂತ ಸರದೇಶಪಾಂಡೆ ನಿಧನ
ಕನ್ನಡ ಕಾದಂಬರಿ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುತ್ತಿರುವ ಕೀರ್ತಿ ಭೈರಪ್ಪನವರದು
Dinesh Gundu Rao talks about holistic health policies
Dawn at dusk
Indian companies are shifting and changing to face market reality
ಕನ್ನಡಕ್ಕೊಬ್ಬನೇ ಕೈಲಾಸಂ
Siddaramaiah stays ahead of his deputy in power game
ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರಾದ ಜಯಚಾಮ ರಾಜೇಂದ್ರ ಒಡೆಯರ್ ಜನಿಸಿದ್ದು ಜುಲೈ 18
ಮೈಸೂರು ಸಂಸ್ಥಾನದ ಹೆಮ್ಮೆಯ ಮಹಾರಾಜರು – ಕನ್ನಡದ ಭೋಜ ಶ್ರೀ ಮುಮ್ಮಡಿ ಕೃಷ್ಣರಾಜ ಒಡೆಯರ್
PinnedNews
Socialist at heart, Somanahalli Mallaiah Krishna was a man of revolutions in Karnataka. He initiated industrial revolution with the establishment of Peenya industrial area, which remains Asia’s largest industrial cluster. Krishna sowed the seeds of IT & BT sector in Bengaluru with a slew of encouraging policies. And, he initiated social revolution with codification of land records, health insurance scheme Yashaswini and mid-day meals facility in schools.
As a socialist he wanted.
AdSpace









